6:40 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರಿಗೆ ಆಹ್ವಾನ: ಸಿಎಂ ಸಿದ್ದರಾಮಯ್ಯ

22/08/2025, 20:52

ಬೆಂಗಳೂರು(reporterkarnataka.com): ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು.
ಈ ಬಾರಿ ಶಾಸ್ತ್ರದ ಪ್ರಕಾರ ಹನ್ನೊಂದು ದಿನ ದಸರಾ ನಡೆಯಲಿದೆ. ಅಕ್ಟೋಬರ್ 2 ರಂದು ವಿಜಯದಶಮಿ ಎಂದರು.

*ರಕ್ಷಣಾ ಸಚಿವರಿಗೆ ಪತ್ರ*
ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣೆಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

*ಆ. 29ರಂದು ಪಾದಯಾತ್ರೆಯಲ್ಲಿ ಭಾಗಿ*
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಬಿಹಾರದಲ್ಲಿ ಮತಗಳ್ಳತನ ನಡೆದಿರುವುದನ್ನು ವಿರೋಧಿಸಿ 16 ದಿನಗಳ ಪಾದಯಾತ್ರೆಯನ್ನು ಕೈಗೊಂಡಿದ್ದು, ಈ ತಿಂಗಳ 29 ರಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.
ಲೋಕಸಭೆಯಲ್ಲಿ 30 ದಿನಗಳ ಕಾಲ ಜೈಲು ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳನ್ನು ವಜಾ ಮಾಡುವ ಮಸೂದೆ ಬಗ್ಗೆ ಮಾತನಾಡಿ, ಮಸೂದೆಯನ್ನು ಸದನ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು