10:59 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು!

29/03/2022, 11:14

ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ್​ಫ್ರೆಂಡ್​​ಗಳ ಸಹಾಯದಿಂದ ತಾಯಿಯನ್ನು ಕೊಲೆಮಾಡಿದ್ದಾಳೆ.

ಬಾಲಕಿ ತನ್ನ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದಳು, ಇದರಿಂದ ಮಗಳಿಗೆ ಅಮ್ಮ ಬುದ್ಧಿ ಹೇಳಿದ್ದಕ್ಕೆ ಆಕೆ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದಳು.ಇದೇ ಕಾರಣಕ್ಕೆ ಅಮ್ಮ-ಮಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.

ಆರಂಭದಲ್ಲಿ ಕೊಲೆ ವಿಚಾರ ತಿಳಿದು ಪೊಲೀಸರು ಬಂದಾಗ ಮುನಿಯಲಕ್ಷ್ಮಿ ಎಂಬ ಮಹಿಳೆ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಆಕೆಯ 17 ವರ್ಷದ ಮಗಳು ಮೃತದೇಹದ ಪಕ್ಕದಲ್ಲಿ ಕುಳಿತಿದ್ದಳು ಎನ್ನಲಾಗಿದೆ.

ಈ ಕುರಿತು ವಿಚಾರಿಸಿದಾಗ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ನನ್ನ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಆ ಬಾಲಕಿ ಹೇಳಿದ್ದಳು. ಆದರೆ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಇಬ್ಬರು ಬಾಯ್​ಫ್ರೆಂಡ್​ಗಳ ಸಹಾಯದಿಂದ ಹುಡುಗಿ ತನ್ನ ತಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಗಂಡನೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುನಿಯಲಕ್ಷ್ಮಿ ಒಂಟಿಯಾಗಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 17 ವರ್ಷದ ಬಾಲಕಿ, ಆಕೆಯ ತಂಗಿ ಮತ್ತು ತಮ್ಮ ಅಪ್ಪನೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು