6:08 AM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು!

29/03/2022, 11:14

ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ್​ಫ್ರೆಂಡ್​​ಗಳ ಸಹಾಯದಿಂದ ತಾಯಿಯನ್ನು ಕೊಲೆಮಾಡಿದ್ದಾಳೆ.

ಬಾಲಕಿ ತನ್ನ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದಳು, ಇದರಿಂದ ಮಗಳಿಗೆ ಅಮ್ಮ ಬುದ್ಧಿ ಹೇಳಿದ್ದಕ್ಕೆ ಆಕೆ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದಳು.ಇದೇ ಕಾರಣಕ್ಕೆ ಅಮ್ಮ-ಮಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.

ಆರಂಭದಲ್ಲಿ ಕೊಲೆ ವಿಚಾರ ತಿಳಿದು ಪೊಲೀಸರು ಬಂದಾಗ ಮುನಿಯಲಕ್ಷ್ಮಿ ಎಂಬ ಮಹಿಳೆ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಆಕೆಯ 17 ವರ್ಷದ ಮಗಳು ಮೃತದೇಹದ ಪಕ್ಕದಲ್ಲಿ ಕುಳಿತಿದ್ದಳು ಎನ್ನಲಾಗಿದೆ.

ಈ ಕುರಿತು ವಿಚಾರಿಸಿದಾಗ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ನನ್ನ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಆ ಬಾಲಕಿ ಹೇಳಿದ್ದಳು. ಆದರೆ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಇಬ್ಬರು ಬಾಯ್​ಫ್ರೆಂಡ್​ಗಳ ಸಹಾಯದಿಂದ ಹುಡುಗಿ ತನ್ನ ತಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಗಂಡನೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುನಿಯಲಕ್ಷ್ಮಿ ಒಂಟಿಯಾಗಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 17 ವರ್ಷದ ಬಾಲಕಿ, ಆಕೆಯ ತಂಗಿ ಮತ್ತು ತಮ್ಮ ಅಪ್ಪನೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು