4:24 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಗಳ ಸಹವಾಸ ಬೇಡವೆಂದು ಬುದ್ದಿ ಹೇಳಿದ ಹೆತ್ತಬ್ಬೆ: ಪಾಪಿ ಅಪ್ರಾಪ್ತ ಪುತ್ರಿ ಆಕೆಯ ಕೊಂದೇ ಬಿಟ್ಲು!

29/03/2022, 11:14

ತೂತುಕುಡಿ(reporterkarnataka.com): ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಸುತ್ತಾಡುತ್ತಿದ್ದ ಮಗಳಿಗೆ ಬುದ್ಧಿ ಹೇಳಿದ್ದಕ್ಕೆ ಸ್ವಂತ ಅಮ್ಮನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತೂತುಕುಡಿಯಲ್ಲಿ ಇಂತಹ ಘಟನೆ ನಡೆದಿದ್ದು, 17 ವರ್ಷದ ಬಾಲಕಿ ತನ್ನ ಇಬ್ಬರು ಬಾಯ್​ಫ್ರೆಂಡ್​​ಗಳ ಸಹಾಯದಿಂದ ತಾಯಿಯನ್ನು ಕೊಲೆಮಾಡಿದ್ದಾಳೆ.

ಬಾಲಕಿ ತನ್ನ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದಳು, ಇದರಿಂದ ಮಗಳಿಗೆ ಅಮ್ಮ ಬುದ್ಧಿ ಹೇಳಿದ್ದಕ್ಕೆ ಆಕೆ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದಳು.ಇದೇ ಕಾರಣಕ್ಕೆ ಅಮ್ಮ-ಮಗಳ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಕಾರಣಕ್ಕೆ ತನ್ನ ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.

ಆರಂಭದಲ್ಲಿ ಕೊಲೆ ವಿಚಾರ ತಿಳಿದು ಪೊಲೀಸರು ಬಂದಾಗ ಮುನಿಯಲಕ್ಷ್ಮಿ ಎಂಬ ಮಹಿಳೆ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಆಕೆಯ 17 ವರ್ಷದ ಮಗಳು ಮೃತದೇಹದ ಪಕ್ಕದಲ್ಲಿ ಕುಳಿತಿದ್ದಳು ಎನ್ನಲಾಗಿದೆ.

ಈ ಕುರಿತು ವಿಚಾರಿಸಿದಾಗ ಇಬ್ಬರು ವ್ಯಕ್ತಿಗಳು ಮನೆಗೆ ನುಗ್ಗಿ ನನ್ನ ತಾಯಿಯನ್ನು ಕೊಲೆ ಮಾಡಿದ್ದಾರೆ ಎಂದು ಆ ಬಾಲಕಿ ಹೇಳಿದ್ದಳು. ಆದರೆ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಿದಾಗ ಇಬ್ಬರು ಬಾಯ್​ಫ್ರೆಂಡ್​ಗಳ ಸಹಾಯದಿಂದ ಹುಡುಗಿ ತನ್ನ ತಾಯಿಯನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಗಂಡನೊಂದಿಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಮುನಿಯಲಕ್ಷ್ಮಿ ಒಂಟಿಯಾಗಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. 17 ವರ್ಷದ ಬಾಲಕಿ, ಆಕೆಯ ತಂಗಿ ಮತ್ತು ತಮ್ಮ ಅಪ್ಪನೊಂದಿಗೆ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು