9:03 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಬಾಯ್ ಫ್ರೆಂಡ್ ಜತೆ ಸೇರಿ ಪತಿಯನ್ನು ಕೊಂದ ದುಷ್ಟ ಪತ್ನಿ: ವಾಮಾಚಾರ ಕಥೆ ಹೆಣೆದು ಲಾಕ್ ಆದ ಕಿಲ್ಲರ್ ಲೇಡಿ

04/11/2024, 19:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವ್ಯಕ್ತಿಯ ಕತ್ತನ್ನ ಕೊಯ್ದು ನಿಗೂಢವಾಗಿ ಕೊಂದು ವಾಮಾಚಾರ ಕಥೆ ಹಣೆದು ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ ದುಷ್ಟರು ಖಾಕಿ ಅತಿಥಿಗಳಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಹಾತೊರೆದ ಪತ್ನಿ ತನ್ನ ಬಾಯ್ ಫ್ರೆಂಡ್ ಗಳ ಜೊತೆ ಸೇರಿ ಪತ್ನಿಯನ್ನು ಭೀಕರವಾಗಿ ಕೊಂದು ವಾಮಾಚಾರಕ್ಕೆ ಬಲಿಯಾದಂತೆ ಬಿಂಬಿಸಿ ತನಿಖೆ ದಿಕ್ಕು ತಪ್ಪಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ರವರ ಸೂಕ್ತ ಮಾರ್ಗದರ್ಶನದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ರವರ ಉಸ್ತುವಾರಿಯಲ್ಲಿ ಡಿವೈಎಸ್ಪಿ ರಘು ಹಾಗೂ ಹುಲ್ಲಹಳ್ಳಿ ಪಿಐ ಮನೋಜ್ ಕುಮಾರ್,ಪಿಎಸ್ಸೈ ಚೇತನ್ ಕುಮಾರ್ ರವರ ನೇತೃತ್ವದಲ್ಲಿ ಹಂತಕರ ಬೆನ್ನುಹತ್ತಿದಾಗ ಕೊಲೆಗಡುಕರು ಸಿಕ್ಕಿಬಿದ್ದಿದ್ದಾರೆ. ಕೊಲೆಯಾದವನ ಪತ್ನಿ ರಾಜೇಶ್ವರಿ, ಸ್ನೇಹಿತರಾದ ಶಿವಯ್ಯ ಹಾಗೂ ರಂಗಸ್ವಾಮಿ ಪೊಲೀಸರ ಸೂಕ್ತ ತೆನಿಖೆಯಲ್ಲಿ ಸಿಕ್ಕಿಬಿದ್ದ ಹಂತಕರು.
ಸೆಪ್ಟೆಂಬರ್ 18ರಂದು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಡುವಿನಹಳ್ಳಿಯ ಸರ್ಕಾರಿ ಶಾಲೆ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ವ್ಯಕ್ತಿಯ ಕತ್ತನ್ನ ಕೊಯ್ದು ಬಿಸಾಡಲಾಗಿತ್ತು. ಸಮೀಪದಲ್ಲಿ ವಾಮಾಚಾರ ನಡೆಸಿದಂತೆ ನಿಂಬೆಹಣ್ಣ,101 ರೂ ಹಾಗೂ ಅರಿಶಿನ ಕುಂಕುಮ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ವಾಮಾಚಾರ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆಂದು ಬಿಂಬಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಠಾಣೆ ಪೊಲೀಸರು ನಿಗೂಢತೆಯನ್ನ ಭೇದಿಸಲು ಸಿಬ್ಬಂದಿಗಳಾದ ರಸೂಲ್ ಪಾಗೇವಾಲ, ಸತೀಶ್, ಅಬ್ದುಲ್ ಲತೀಫ್, ಭಾಸ್ಕರ್, ಅಶೋಕ್, ಶಿವಕುಮಾರ್, ದೊಡ್ಡಯ್ಯ, ಮಹಿಳಾ ಸಿಬ್ಬಂದಿಗಳಾದ ಆಶಾ ಹಾಗೂ ಶ್ರೀದೇವಿ ರವರನ್ನೊಳಗೊಂಡ ತಂಡ ರಚಿಸಲಾಗಿತ್ತು.ನಿಗೂಢ ಕೊಲೆಯ ರಹಸ್ಯ ಭೇಧಿಸಿದ ನಂಜನಗೂಡು ಖಾಕಿ ಪಡೆ ಹಂತಕರ ಸಂಚು ಬಯಲು ಮಾಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸದಾಶಿವನನ್ನ ಪತ್ನಿ ರಾಜೇಶ್ವರಿ ತನ್ನ ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದು ನಂತರ ವಾಮಾಚಾರಕ್ಕೆ ಬಲಿಯಾದಂತೆ ಬಿಂಬಿಸಿದ್ದರು. ತನಿಖೆಯಲ್ಲಿ ಕೊಲೆ ಕಾರಣ ತಿಳಿಸಿದ ಪತ್ನಿ ರಾಜೇಶ್ವರಿ ಇದೀಗ ತನ್ನ ಬಾಯ್ ಫ್ರೆಂಡ್ ಜೊತೆ ಸೇರಿ ಕಂಬಿ ಎಣಿಸುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು