4:11 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಾಯ್​ಫ್ರೆಂಡ್​​ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ

07/03/2024, 11:47

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬಾಯ್ ಫ್ರೆಂಡ್ ದಿನೇಶ್​ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ಪ್ರತಿ ದಿನಚೂ ಹಲ್ಲೆ ನಡೆಸುತ್ತಿದ್ದಳು. ಮುಗುವಿನ ಮೈ ಮೇಲೆ ಸಾಕಷ್ಟು ಗಾಯದ ಗುರುತುಗಳಿವೆ. ಮಗುವಿನ ಗುಪ್ತಾಂಗಕ್ಕೂ ಗಾಯಗೊಳಿಸಿದ್ದಳು. ಇದೆಲ್ಲ ಯಾರು ಮಾಡಿದ್ದು ಎಂದು ಮಗುವಿನಲ್ಲಿ ಪ್ರಶ್ನಿಸಿದರೆ, ಅಮ್ಮ ಮತ್ತು ಅಂಕಲ್ ಅಂತ ಮಗು ಹೇಳುತ್ತದೆ.
ಇಷ್ಟೇ ಅಲ್ಲದೆ ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ
ಬರುತ್ತಿದ್ದಳು. ಕುಡಿಯಲು ಮಗುವಿಗೆ ನೀರು ಕೂಡ ಇಡುತ್ತಿರಲಿಲ್ಲ. ಇದನ್ನು ಕಂಡು ನೆರೆಹೊರೆಯವರು ಮಗುವಿಗೆ ನೀರು, ಆಹಾರ ನೀಡುತ್ತಿದ್ದರು.
ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮನೆಗೆ ಬರುತ್ತಿದ್ದ ಮಹಿಳೆಯ ಫ್ರೆಂಡ್ ಕೂಡ ಮಗುವಿಗೆ ಹಲ್ಲೆ ನಡೆಸುತ್ತಿದ್ದ. ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ. ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ.
ಆರೋಪಿ ತಾಯಿ ಶಾರಿನ್ ಗೆ ಈ ಹಿಂದೆ ಶಂಕರ್​ ಎಂಬಾತನ ಜೊತೆಗೆ ವಿವಾಹವಾಗಿತ್ತು. ಆದರೆ ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗಿರುವುದಾಗಿ ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು