11:26 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಾಯ್​ಫ್ರೆಂಡ್​​ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ

07/03/2024, 11:47

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬಾಯ್ ಫ್ರೆಂಡ್ ದಿನೇಶ್​ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ಪ್ರತಿ ದಿನಚೂ ಹಲ್ಲೆ ನಡೆಸುತ್ತಿದ್ದಳು. ಮುಗುವಿನ ಮೈ ಮೇಲೆ ಸಾಕಷ್ಟು ಗಾಯದ ಗುರುತುಗಳಿವೆ. ಮಗುವಿನ ಗುಪ್ತಾಂಗಕ್ಕೂ ಗಾಯಗೊಳಿಸಿದ್ದಳು. ಇದೆಲ್ಲ ಯಾರು ಮಾಡಿದ್ದು ಎಂದು ಮಗುವಿನಲ್ಲಿ ಪ್ರಶ್ನಿಸಿದರೆ, ಅಮ್ಮ ಮತ್ತು ಅಂಕಲ್ ಅಂತ ಮಗು ಹೇಳುತ್ತದೆ.
ಇಷ್ಟೇ ಅಲ್ಲದೆ ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ
ಬರುತ್ತಿದ್ದಳು. ಕುಡಿಯಲು ಮಗುವಿಗೆ ನೀರು ಕೂಡ ಇಡುತ್ತಿರಲಿಲ್ಲ. ಇದನ್ನು ಕಂಡು ನೆರೆಹೊರೆಯವರು ಮಗುವಿಗೆ ನೀರು, ಆಹಾರ ನೀಡುತ್ತಿದ್ದರು.
ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮನೆಗೆ ಬರುತ್ತಿದ್ದ ಮಹಿಳೆಯ ಫ್ರೆಂಡ್ ಕೂಡ ಮಗುವಿಗೆ ಹಲ್ಲೆ ನಡೆಸುತ್ತಿದ್ದ. ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ. ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ.
ಆರೋಪಿ ತಾಯಿ ಶಾರಿನ್ ಗೆ ಈ ಹಿಂದೆ ಶಂಕರ್​ ಎಂಬಾತನ ಜೊತೆಗೆ ವಿವಾಹವಾಗಿತ್ತು. ಆದರೆ ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗಿರುವುದಾಗಿ ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು