5:39 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಬಾಯ್​ಫ್ರೆಂಡ್​​ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ

07/03/2024, 11:47

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬಾಯ್ ಫ್ರೆಂಡ್ ದಿನೇಶ್​ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ಪ್ರತಿ ದಿನಚೂ ಹಲ್ಲೆ ನಡೆಸುತ್ತಿದ್ದಳು. ಮುಗುವಿನ ಮೈ ಮೇಲೆ ಸಾಕಷ್ಟು ಗಾಯದ ಗುರುತುಗಳಿವೆ. ಮಗುವಿನ ಗುಪ್ತಾಂಗಕ್ಕೂ ಗಾಯಗೊಳಿಸಿದ್ದಳು. ಇದೆಲ್ಲ ಯಾರು ಮಾಡಿದ್ದು ಎಂದು ಮಗುವಿನಲ್ಲಿ ಪ್ರಶ್ನಿಸಿದರೆ, ಅಮ್ಮ ಮತ್ತು ಅಂಕಲ್ ಅಂತ ಮಗು ಹೇಳುತ್ತದೆ.
ಇಷ್ಟೇ ಅಲ್ಲದೆ ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ
ಬರುತ್ತಿದ್ದಳು. ಕುಡಿಯಲು ಮಗುವಿಗೆ ನೀರು ಕೂಡ ಇಡುತ್ತಿರಲಿಲ್ಲ. ಇದನ್ನು ಕಂಡು ನೆರೆಹೊರೆಯವರು ಮಗುವಿಗೆ ನೀರು, ಆಹಾರ ನೀಡುತ್ತಿದ್ದರು.
ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮನೆಗೆ ಬರುತ್ತಿದ್ದ ಮಹಿಳೆಯ ಫ್ರೆಂಡ್ ಕೂಡ ಮಗುವಿಗೆ ಹಲ್ಲೆ ನಡೆಸುತ್ತಿದ್ದ. ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ. ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ.
ಆರೋಪಿ ತಾಯಿ ಶಾರಿನ್ ಗೆ ಈ ಹಿಂದೆ ಶಂಕರ್​ ಎಂಬಾತನ ಜೊತೆಗೆ ವಿವಾಹವಾಗಿತ್ತು. ಆದರೆ ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗಿರುವುದಾಗಿ ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು