2:58 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಬಾಯ್​ಫ್ರೆಂಡ್​​ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ

07/03/2024, 11:47

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬಾಯ್ ಫ್ರೆಂಡ್ ದಿನೇಶ್​ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ಪ್ರತಿ ದಿನಚೂ ಹಲ್ಲೆ ನಡೆಸುತ್ತಿದ್ದಳು. ಮುಗುವಿನ ಮೈ ಮೇಲೆ ಸಾಕಷ್ಟು ಗಾಯದ ಗುರುತುಗಳಿವೆ. ಮಗುವಿನ ಗುಪ್ತಾಂಗಕ್ಕೂ ಗಾಯಗೊಳಿಸಿದ್ದಳು. ಇದೆಲ್ಲ ಯಾರು ಮಾಡಿದ್ದು ಎಂದು ಮಗುವಿನಲ್ಲಿ ಪ್ರಶ್ನಿಸಿದರೆ, ಅಮ್ಮ ಮತ್ತು ಅಂಕಲ್ ಅಂತ ಮಗು ಹೇಳುತ್ತದೆ.
ಇಷ್ಟೇ ಅಲ್ಲದೆ ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ
ಬರುತ್ತಿದ್ದಳು. ಕುಡಿಯಲು ಮಗುವಿಗೆ ನೀರು ಕೂಡ ಇಡುತ್ತಿರಲಿಲ್ಲ. ಇದನ್ನು ಕಂಡು ನೆರೆಹೊರೆಯವರು ಮಗುವಿಗೆ ನೀರು, ಆಹಾರ ನೀಡುತ್ತಿದ್ದರು.
ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮನೆಗೆ ಬರುತ್ತಿದ್ದ ಮಹಿಳೆಯ ಫ್ರೆಂಡ್ ಕೂಡ ಮಗುವಿಗೆ ಹಲ್ಲೆ ನಡೆಸುತ್ತಿದ್ದ. ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ. ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ.
ಆರೋಪಿ ತಾಯಿ ಶಾರಿನ್ ಗೆ ಈ ಹಿಂದೆ ಶಂಕರ್​ ಎಂಬಾತನ ಜೊತೆಗೆ ವಿವಾಹವಾಗಿತ್ತು. ಆದರೆ ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗಿರುವುದಾಗಿ ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು