10:36 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬಾಯ್​ಫ್ರೆಂಡ್​​ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ

07/03/2024, 11:47

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್‌ ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬಾಯ್ ಫ್ರೆಂಡ್ ದಿನೇಶ್​ ಜೊತೆ ಸೇರಿ ತಾಯಿ ಶಾರಿನ್ ತನ್ನ 4 ವರ್ಷದ ಮಗುವಿನ ಮೇಲೆ ಪ್ರತಿ ದಿನಚೂ ಹಲ್ಲೆ ನಡೆಸುತ್ತಿದ್ದಳು. ಮುಗುವಿನ ಮೈ ಮೇಲೆ ಸಾಕಷ್ಟು ಗಾಯದ ಗುರುತುಗಳಿವೆ. ಮಗುವಿನ ಗುಪ್ತಾಂಗಕ್ಕೂ ಗಾಯಗೊಳಿಸಿದ್ದಳು. ಇದೆಲ್ಲ ಯಾರು ಮಾಡಿದ್ದು ಎಂದು ಮಗುವಿನಲ್ಲಿ ಪ್ರಶ್ನಿಸಿದರೆ, ಅಮ್ಮ ಮತ್ತು ಅಂಕಲ್ ಅಂತ ಮಗು ಹೇಳುತ್ತದೆ.
ಇಷ್ಟೇ ಅಲ್ಲದೆ ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮಗುವನ್ನು ಮನೆಯಲ್ಲಿ ಬಿಟ್ಟು ಬೀಗ ಹಾಕಿ ಹೋದರೆ, ರಾತ್ರಿ
ಬರುತ್ತಿದ್ದಳು. ಕುಡಿಯಲು ಮಗುವಿಗೆ ನೀರು ಕೂಡ ಇಡುತ್ತಿರಲಿಲ್ಲ. ಇದನ್ನು ಕಂಡು ನೆರೆಹೊರೆಯವರು ಮಗುವಿಗೆ ನೀರು, ಆಹಾರ ನೀಡುತ್ತಿದ್ದರು.
ಇನ್ನು ಮಧ್ಯಾಹ್ನ ಮಗುವಿಗೆ ಊಟ ಕೊಡೋಕೆ ಅಂತಾ ಮನೆಗೆ ಬರುತ್ತಿದ್ದ ಮಹಿಳೆಯ ಫ್ರೆಂಡ್ ಕೂಡ ಮಗುವಿಗೆ ಹಲ್ಲೆ ನಡೆಸುತ್ತಿದ್ದ. ತಾಯಿ ಮತ್ತು ಅಂಕಲ್​ ನನಗೆ ಹಲ್ಲೆ ಮಾಡುವುದಾಗಿ ಮಗು ಹೇಳಿಕೊಂಡಿದೆ. ಇನ್ನು ಈ ಘಟನೆ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗವೇಣಿ ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ಶಿಶು ಮಂದಿರದಲ್ಲಿ ಮಗುವಿನ ಪಾಲನೆ ಮಾಡಲಾಗುತ್ತಿದೆ.
ಆರೋಪಿ ತಾಯಿ ಶಾರಿನ್ ಗೆ ಈ ಹಿಂದೆ ಶಂಕರ್​ ಎಂಬಾತನ ಜೊತೆಗೆ ವಿವಾಹವಾಗಿತ್ತು. ಆದರೆ ಆಕೆ ಗಂಡನ ಜೊತೆಗೆ ವಾಸಿಸುತ್ತಿರಲಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನ ಮನೆಯಲ್ಲೇ ಕೂಡಿಹಾಕಿ ಹೋಗಿರುವುದಾಗಿ ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು