1:35 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ರೇಷನ್ ಕಾರ್ಡ್ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಎಂ ಪ್ರತಿಭಟನೆ

09/11/2024, 16:31

ಮಂಗಳೂರು(reporterkarnataka.com):ಪಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಆದ ವಿಳಂಬಕ್ಕೆ ದಂಡ ಕಟ್ಟಿದ ಅಸಂಖ್ಯಾತ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಕೂಡಲೇ ವಾಪಸ್ ಪಡೆಯಬೇಕು, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಕೂಡಲೇ ವಾಪಸ್ ನೀಡಬೇಕು,ರೇಷನ್ ಕಾರ್ಡ್ ನಲ್ಲಿರುವ ಹಲವಾರು ಗೊಂದಲ, ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ಒತ್ತಾಯಿಸಿ ಸಿಪಿಎಂ ಉಳ್ಳಾಲ ಹಾಗೂ ಮುಡಿಪು ವಲಯ ಸಮಿತಿಗಳ ಜಂಟಿ ನೇತ್ರತ್ವದಲ್ಲಿ ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಜ್ಞಾಪೂರ್ವಕವಾಗಿ ನಾಶಪಡಿಸಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗಿದರು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟ್ಟು, ಕೇಂದ್ರ ಸರ್ಕಾರ,ಈ ಹಿಂದೆ ಬಿಪಿಎಲ್ ಕಾರ್ಡ್ ಪರಿಶೀಲನೆಗೆ, ಪ್ಯಾನ್ ನಂಬರ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಆದೇಶ ನೀಡಿತ್ತು. ಜನರಿಗೆ ಇದರ ಕುರಿತು ಸರಿಯಾದ ಮಾಹಿತಿ ಇಲ್ಲದ್ದರಿಂದ ನಿಗದಿತ ಗಡುವಿನೊಳಗೆ ಆಧಾರ್ ಲಿಂಕ್ ಮಾಡಲು ಸಾಧ್ಯವಾಗಲಿಲ್ಲ. ಅದನ್ನು ದಂಡನೆಗೊಳಪಡಿಸಲು ಕೇಂದ್ರ ಸರಕಾರ ನಿರ್ಧರಿಸಿ ದಂಡ ವಿಧಿಸಿತು. ತಡವಾಗಿ ಲಿಂಕ್ ಮಾಡಿದವರು ಆದಾಯ ತೆರಿಗೆ ಇಲಾಖೆಗೆ ಒಂದು ಸಾವಿರ ರೂ ದಂಡ ಪಾವತಿಸಿದ್ದರು ಮತ್ತು ಇದನ್ನು ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆ ದಂಡವನ್ನೇ ಆದಾಯವೆಂದು ಪರಿಗಣಿಸಿತು. ಇದು ಬಡವರನ್ನು ಸೌಲಭ್ಯದಿಂದ ಹೊರದೂಡಲು ನೆರವಾಯಿತು. ಕೇಂದ್ರ ಸರಕಾರದ ಈ ನಡೆ ಸ್ಪಷ್ಟವಾಗಿ ಜನ ವಿರೋಧಿಯಾಗಿದೆ. ಬಡವರನ್ನು ಸೌಲಭ್ಯದಿಂದ ಹೊರಗಿಡುವ ತಂತ್ರದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಎಂ ಉಳ್ಳಾಲ ವಲಯ ಸಮಿತಿಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಇತ್ತೀಚೆಗೆ, ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಬಿಪಿಎಲ್ ಕಾರ್ಡಗಳ ಆರ್ಹತೆ ಪರಿಶೀಲನೆಗೆ ಕ್ರಮವಹಿಸಿ, ಪ್ಯಾನ್ ನಂಬರ್ ಗೆ ಆಧಾರ್ ನಂಬರ್ ಲಿಂಕ್ ವಿಳಂಬಕ್ಕೆ ಆದಾಯ ತೆರಿಗೆ ಇಲಾಖೆಗೆ ದಂಡ ಪಾವತಿಸಿದ್ದ ರಾಜ್ಯದ ಬಿಪಿಎಲ್ ಕಾರ್ಡ್ ಕುಟುಂಬಗಳನ್ನು ಈ ಇಲಾಖೆಯು ಸರಿಯಾಗಿ ಗಮನಿಸದೆ, ಆದಾಯ ತೆರಿಗೆ ಪಾವತಿದಾರರ ಪಟ್ಟಿಗೆ ಸೇರಿಸಿತಲ್ಲದೆ, ರಾಜ್ಯದ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಡಗಳನ್ನು ಅವಸರದಲ್ಲಿ ಕಡಿತ ಮಾಡಿತು. ಇದು ಮತ್ತೊಂದು ದೊಡ್ಡ ತಪ್ಪಾದ ನಡೆಯಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಎಂ ಮುಡಿಪು ವಲಯ ಸಮಿತಿ ಕಾರ್ಯದರ್ಶಿ ರಫೀಕ್ ಹರೇಕಳರವರು, ರಾಜ್ಯದ ಅಪಾರ ಸಂಖ್ಯೆಯ ನೈಜ ಬಿಪಿಎಲ್ ಕಾರ್ಡದಾರರು ತೊಂದರೆಗೊಳಗಾಗಿದ್ದಾರೆ. ಸರಕಾರದ ಯಾವುದೇ ಸಹಾಯ/ ಸೌಲಭ್ಯ ಪಡೆಯಲು ಬಿಪಿಎಲ್ ಕಾರ್ಡ್ ತೋರುವುದು ಮಾನದಂಡವಾಗಿರುವುದರಿಂದ ಈ ದುರುದ್ದೇಶ ಪೂರಿತ ಅವಸರದ ತಪ್ಪಾದ ನಡೆಯು ಅವರನ್ನು ಅನೇಕ ಸೌಲಭ್ಯಗಳಿಂದ ವಂಚಿತರನ್ನಾಗಿಸಿದೆ ಎಂದು ಹೇಳಿದರು.
ಪ್ರತಿಭಟನೆ ಲಯನ್ನುದ್ದೇಶಿಸಿ ಸಿಪಿಎಂ ಜಿಲ್ಲಾ ನಾಯಕರಾದ ಕ್ರಷ್ಣಪ್ಪ ಸಾಲ್ಯಾನ್, ಜಯಂತ ನಾಯಕ್ ರವರು ಮಾತನಾಡಿದರು.ಪ್ರತಿಭಟನೆಯಲ್ಲಿ ಸಿಪಿಎಂ ಉಳ್ಳಾಲ ವಲಯ ಸಮಿತಿ ಮುಖಂಡರಾದ ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ಶೇಖರ್ ಕುಂದರ್, ಪ್ರಮೋದಿನಿ ಕಲ್ಲಾಪು, ಜನಾರ್ಧನ ಕುತ್ತಾರ್, ಬಾಬು ಶೆಟ್ಟಿ ಪಿಲಾರ್, ಇಬ್ರಾಹಿಂ ಮದಕ, ಸಿಪಿಎಂ ಮುಡಿಪು ವಲಯ ಸಮಿತಿ ನಾಯಕರಾದ ರಾಮಚಂದ್ರ ಪಜೀರ್, ರಿಜ್ವಾನ್ ಹರೇಕಳ, ರಜಾಕ್ ಮೊಂಟೆಪದವು, ರಜಾಕ್ ಮುಡಿಪು,ಅಸ್ಪಕ್ ಅಲೇಕಳ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು