8:49 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್: ವಿದ್ಯಾರ್ಥಿ ವೇತನ, ಅಸಹಾಯಕರಿಗೆ ಧನ ಸಹಾಯ ವಿತರಣೆ

22/09/2025, 22:27

ಮಂಗಳೂರು(reporterkarnataka.com): ನಗರದ ಪಡೀಲ್ ನಲ್ಲಿ ಇತ್ತೀಚೆಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಮೂಲಕವಾಗಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಪಡೀಲ್ ಇದರ ಸಹಯೋಗದೊಂದಿಗೆ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಆಶಕ್ತರಿಗೆ, ಅಸಹಾಯಕರಿಗೆ ಧನ ಸಹಾಯವನ್ನು ವಿತರಿಸಲಾಯಿತು.
ಟ್ರಸ್ಟ್ ನ ಗೌರವಾಧ್ಯಕ್ಷರಾದ ವಾಮನ್ ಕುದ್ರೋಳಿ ಮಾತನಾಡಿ, ಟ್ರಸ್ಟ್ ತನ್ನ ಸೇವಾಕಾರ್ಯಗಳನ್ನು ಕಳೆದ 23 ವರುಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ವಿದ್ಯಾರ್ಥಿ ವೇತನ, ಆಶಕ್ತರಿಗೆ ಸಹಾಯ ಹಸ್ತ, ಆರೋಗ್ಯ ಶಿಬಿರ, ಕನ್ನಡಕ ವಿತರಣೆ ಪ್ರಮುಖವಾಗಿವೆ, ಜೊತೆಗೆ ಮಾಹಿತಿ ಆಧಾರಿತ ಮಾಧ್ಯಮವಾಗಿ ಆತ್ಮಶಕ್ತಿ ಪತ್ರಿಕೆಯನ್ನು ಹೊರತರಲಾಗುತ್ತಿದೆ, ಈ ಕಾರ್ಯಕ್ರವನ್ನು ನಡೆಸುವುದರಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಇದರ ಪಾತ್ರವೂ ಉಲ್ಲೇಖನೀಯವೆಂದರು,ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರೂ, ಟ್ರಸ್ಟ್ ನ ಕಾರ್ಯಧ್ಯಕ್ಷರೂ ಆದ ಸಹಕಾರ ರತ್ನ ಚಿತ್ತಾರಂಜನ್ ಬೋಳಾರ್ ಮಾತನಾಡುತ್ತಾ ಇಂತಹ ಸೇವಾ ಕಾರ್ಯಗಳಲ್ಲೂ ಸಂಘ ತನ್ನ ಹಸ್ತವನ್ನು ದೀರ್ಘವಾಗಿಸಿ ಟ್ರಸ್ಟ್ ನ ಈ ಎಲ್ಲಾ ಸಮಾಜ ಮುಖಿ ಚಟುವಟಿಕೆಗಳಲ್ಲಿ ತನ್ನನ್ನು ಜೊತೆಯಾಗಿಸಿಕೊಂಡಿದೆಯೆಂದರು, ಟ್ರಸ್ಟ್ ಅಧ್ಯಕ್ಷ ಗೋಪಾಲ್ ಪೂಜಾರಿ ಮಾತನಾಡುತ್ತಾ ಸಮಾಜದ ಸೇವೆ ಅದು ದೇವರ ಕೆಲಸ, ಸಮಾಜದ ಬಗ್ಗೆ ನಮಗೆ ಸದಾ ತುಡಿತ ಇರುವುದು ಅವಶ್ಯಕ ನಮಗೆಲ್ಲಾ ಸಮಾಜದ ಋಣ ವಿದೆಯೆಂದರು.
ವೇದಿಕೆಯಲ್ಲಿ ಟ್ರಸ್ಟ್ ನ ಉಪಾಧ್ಯಕ್ಷರಾದ ಮುದ್ದು ಮೂಡುಬೆಳ್ಳೆ, ಕೋಶಾಧಿಕಾರಿ ಬಾಬು ಎಸ್‌. ಕರ್ಕೇರ, ಟ್ರಸ್ಟಿಗಳಾದ ಜಯಚಂದ್ರ ಕಜೆಕಾರ್, ಸದಾನಂದ ಸುವರ್ಣ, ಚಂದ್ರಾವತಿ, ಟ್ರಸ್ಟಿ ಹಾಗೂ ಸಹಕಾರಿ ಸಂಘದ
ಉಪಾಧ್ಯಕ್ಷರಾದ, ನೇಮಿರಾಜ್ ಪಿ, ಸೀತಾರಾಮ್, ಆನಂದ್ ಕೊಂಡಾಣ, ಬಿ. ಪಿ ದಿವಾಕರ್,ರಮಾನಾಥ್ ಸನಿಲ್, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯಾ ವಿಜಯ್ ಮುಂತಾದವರು ಉಪಸ್ಥಿತರಿದ್ದರು.
ಟ್ರಸ್ಟ್ ಕಾರ್ಯದರ್ಶಿ ಗೋಪಾಲ್ ಎಂ. ಫಲಾನುಭವಿಗಳ ಪಟ್ಟಿ ವಾಚಿಸಿದರು. ಜೊತೆ ಕಾರ್ಯದರ್ಶಿ ವಿಶ್ವನಾಥ್ ಪೂಜಾರಿ ರೆಂಜಾಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು