8:33 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು