4:29 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ

28/06/2022, 23:43

ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರಕಾರಕ್ಕೆ ಯಾಕೆ ತಾತ್ಸಾರ ಭಾವನೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ.ಆದರೆ ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗೂ ಪಕ್ಷದ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ  ಬಿಲ್ಲವ, ಈಡಿಗ ಹಾಗೂ ಸಮಸ್ತ ನಾರಾಯಣಗುರುಗಳ ಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ಪ್ರತಿಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವ ಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರ ಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪದ್ಮರಾಜ್ ಆರ್. ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು