4:33 AM Friday20 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ

28/06/2022, 23:43

ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರಕಾರಕ್ಕೆ ಯಾಕೆ ತಾತ್ಸಾರ ಭಾವನೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ.ಆದರೆ ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗೂ ಪಕ್ಷದ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ  ಬಿಲ್ಲವ, ಈಡಿಗ ಹಾಗೂ ಸಮಸ್ತ ನಾರಾಯಣಗುರುಗಳ ಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ಪ್ರತಿಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವ ಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರ ಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪದ್ಮರಾಜ್ ಆರ್. ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು