2:36 PM Sunday24 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯ ಮರು ಸೇರ್ಪಡೆಗೊಳಿಸದಿದ್ದರೆ ತೀವ್ರ ಹೋರಾಟ: ಪದ್ಮರಾಜ್ ಆರ್. ಎಚ್ಚರಿಕೆ

28/06/2022, 23:43

ಮಂಗಳೂರು(reporterkarnataka.com): ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿಲ್ಲ. ಸರಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆ ಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರಕಾರಕ್ಕೆ ಯಾಕೆ ತಾತ್ಸಾರ ಭಾವನೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ನ್ಯಾಯವಾದಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿ ಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿ ಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟು ತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ.ಆದರೆ ಬ್ರಹ್ಮಶ್ರಿ ನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗೂ ಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗೂ ಪಕ್ಷದ ಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರ ಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ  ಬಿಲ್ಲವ, ಈಡಿಗ ಹಾಗೂ ಸಮಸ್ತ ನಾರಾಯಣಗುರುಗಳ ಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ಪ್ರತಿಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ‌ಆಗುತ್ತಿರುವ ಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನ ಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರ ಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪದ್ಮರಾಜ್ ಆರ್. ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು