7:24 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಬಾಡಿಗೆ ಮನೆಯಲ್ಲಿದ್ದ ತಾಯಿ- ಮಗು ನಾಪತ್ತೆ; ಪ್ರಕರಣ ದಾಖಲು

26/12/2021, 12:18

ಬ್ರಹ್ಮಾವರ(reporterkarnataka.com): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. 

ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್. ಹಾಗೂ ಅವರ ಮಗ 6 ವರ್ಷದ ಮನೀಶ್ ನಾಪತ್ತೆಯಾಗಿದ್ದಾರೆ. ಮಾರುತಿ ದಂಪತಿ ಕಳೆದ 6 ತಿಂಗಳಿನಿಂದ ಹಾರಾಡಿ ಗ್ರಾಮದ “ವೆಂಕಪ್ಪ ಅಮೀನ್ ಕಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ವರ್ಷದ ನವೆಂಬರ್ 9 ರಂದು ಮಾರುತಿ ಅವರು ತರಕಾರಿ ವ್ಯಾಪಾರದ ನಿಮಿತ್ತ ಮನೆಯಿಂದ ಪೇಟೆಗೆ ಹೋಗಿದ್ದು, ಸಂಜೆ ಮನೆಗೆ ಬಂದು ನೋಡುವಾಗ ಹೆಂಡಿತಿ ಮತ್ತು ಮಗ ಮನೆಯಲ್ಲಿ ಇರಲಿಲ್ಲ. ಅಕ್ಕಪಕ್ಕ ಮನೆಗಳಲ್ಲಿ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಈವರೆಗೂ ಪತ್ತೆಯಾಗಿರುವುದಿಲ್ಲ.  ಈ ಬಗ್ಗೆ ಪತಿ ಮಾರುತಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು