3:48 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

04/02/2023, 13:25

ಬ್ರಹ್ಮಾವರ(reporterkarnataka.com): ಸ್ಕೂಲ್ ಬ್ಯಾಗ್ ನಲ್ಲಿ ಹಾಕಿ ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಬ್ರಹ್ಮಾವರದ ಹೊನ್ನಾಳದಲ್ಲಿ ನಡೆದಿದೆ.

ಹೂಡೆಯ ಆಫ್ರೀನ್‌ ಬಾನು ಎಂಬವರು ಚಿನ್ನಾಭರಣ ಕಳೆದುಕೊಂಡ ಮಹಿಳೆ. ಇವರು ಜ. 28 ಮತ್ತು 29 ರಂದು ಹೊನ್ನಾಳದಲ್ಲಿ ಸಂಬಂಧಿಕರ ಮದುವೆಯ ಸಮಾರಂಭಕ್ಕೆ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಜ.30ರಂದು ಹೂಡೆಯಲ್ಲಿರುವ ಗಂಡನ ಮನೆಗೆ ಹೊರಟಿದ್ದರು. ಮೈದುನ ಫರಾಜ್‌ ತೋನ್ಸೆ ಅವರನ್ನು ಬರಲು ಹೇಳಿದಂತೆ, ಅವರು ಮಾರುತಿ 800 ಕಾರನ್ನು ತಂದಿದ್ದರು.

ಆಫ್ರೀನ್ ಅವರು ಮದುವೆಗೆಂದು ಲಾಕರ್‌ನಿಂದ ತಂದಿದ್ದ ನೂರಾ ಎಂಬತ್ತೂವರೆ ಗ್ರಾಂ ತೂಕದ ಚಿನ್ನಾಭರಣಗಳನ್ನು ಬೆನ್ನಿಗೆ ಹಾಕುವ ಸ್ಕೂಲ್‌ ಬ್ಯಾಗ್‌ನಲ್ಲಿರಿಸಿ, ಅದನ್ನು ಕಾರಿನ ಹಿಂಬದಿ ಸೀಟಿನಲ್ಲಿ ದೊಡ್ಡ ಲಗ್ಗೇಜ್‌ ಬ್ಯಾಗಿನ ಮೇಲಿಟ್ಟಿದ್ದರು. ಈ ವೇಳೆ ತಾಯಿ ಚಾ ಕುಡಿಯಲು ಕರೆದಿದ್ದು, ಆಗ ಆಫ್ರೀನ್ ಹಾಗೂ ಮೈದುನ ಮನೆಯೊಳಗೆ ಹೋಗಿ ಚಾ ಕುಡಿದು ಬಂದಿದ್ದರು. ಬಳಿಕ ಅಲ್ಲಿಂದ ಹೊರಟು ಹೊಡೆಗೆ ಬಂದು, ಲಾಗೇಜುಗಳನ್ನು ಮನೆಯೊಳಗಿಟ್ಟಿದ್ದರು. ಬಳಿಕ ಸಂಜೆ ಬ್ಯಾಗನ್ನು ಓಪನ್‌ ಮಾಡಿ ನೋಡಿದಾಗ ಅದರಲ್ಲಿಟ್ಟಿದ್ದ 7.26 ಲಕ್ಷ ರೂ. ಮೌಲ್ಯದ 180 ½ (ನೂರಾ ಎಂಬತ್ತೂವರೆ) ಗ್ರಾಂ ತೂಕದ ಚಿನ್ನಾಭರಣಗಳು ಕಾಣೆಯಾಗಿದ್ದವು. ಯಾರೋ ಕಳ್ಳರು ಕಾರಿನಲ್ಲಿ ಇರಿಸಿದ್ದ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು