1:29 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

04/02/2023, 13:25

ಬ್ರಹ್ಮಾವರ(reporterkarnataka.com): ಸ್ಕೂಲ್ ಬ್ಯಾಗ್ ನಲ್ಲಿ ಹಾಕಿ ಕಾರಿನ ಹಿಂಬದಿ ಸೀಟಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಬ್ರಹ್ಮಾವರದ ಹೊನ್ನಾಳದಲ್ಲಿ ನಡೆದಿದೆ.

ಹೂಡೆಯ ಆಫ್ರೀನ್‌ ಬಾನು ಎಂಬವರು ಚಿನ್ನಾಭರಣ ಕಳೆದುಕೊಂಡ ಮಹಿಳೆ. ಇವರು ಜ. 28 ಮತ್ತು 29 ರಂದು ಹೊನ್ನಾಳದಲ್ಲಿ ಸಂಬಂಧಿಕರ ಮದುವೆಯ ಸಮಾರಂಭಕ್ಕೆ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಜ.30ರಂದು ಹೂಡೆಯಲ್ಲಿರುವ ಗಂಡನ ಮನೆಗೆ ಹೊರಟಿದ್ದರು. ಮೈದುನ ಫರಾಜ್‌ ತೋನ್ಸೆ ಅವರನ್ನು ಬರಲು ಹೇಳಿದಂತೆ, ಅವರು ಮಾರುತಿ 800 ಕಾರನ್ನು ತಂದಿದ್ದರು.

ಆಫ್ರೀನ್ ಅವರು ಮದುವೆಗೆಂದು ಲಾಕರ್‌ನಿಂದ ತಂದಿದ್ದ ನೂರಾ ಎಂಬತ್ತೂವರೆ ಗ್ರಾಂ ತೂಕದ ಚಿನ್ನಾಭರಣಗಳನ್ನು ಬೆನ್ನಿಗೆ ಹಾಕುವ ಸ್ಕೂಲ್‌ ಬ್ಯಾಗ್‌ನಲ್ಲಿರಿಸಿ, ಅದನ್ನು ಕಾರಿನ ಹಿಂಬದಿ ಸೀಟಿನಲ್ಲಿ ದೊಡ್ಡ ಲಗ್ಗೇಜ್‌ ಬ್ಯಾಗಿನ ಮೇಲಿಟ್ಟಿದ್ದರು. ಈ ವೇಳೆ ತಾಯಿ ಚಾ ಕುಡಿಯಲು ಕರೆದಿದ್ದು, ಆಗ ಆಫ್ರೀನ್ ಹಾಗೂ ಮೈದುನ ಮನೆಯೊಳಗೆ ಹೋಗಿ ಚಾ ಕುಡಿದು ಬಂದಿದ್ದರು. ಬಳಿಕ ಅಲ್ಲಿಂದ ಹೊರಟು ಹೊಡೆಗೆ ಬಂದು, ಲಾಗೇಜುಗಳನ್ನು ಮನೆಯೊಳಗಿಟ್ಟಿದ್ದರು. ಬಳಿಕ ಸಂಜೆ ಬ್ಯಾಗನ್ನು ಓಪನ್‌ ಮಾಡಿ ನೋಡಿದಾಗ ಅದರಲ್ಲಿಟ್ಟಿದ್ದ 7.26 ಲಕ್ಷ ರೂ. ಮೌಲ್ಯದ 180 ½ (ನೂರಾ ಎಂಬತ್ತೂವರೆ) ಗ್ರಾಂ ತೂಕದ ಚಿನ್ನಾಭರಣಗಳು ಕಾಣೆಯಾಗಿದ್ದವು. ಯಾರೋ ಕಳ್ಳರು ಕಾರಿನಲ್ಲಿ ಇರಿಸಿದ್ದ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು