4:19 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ಆಡಿಷಲ್ ಸಿವಿಲ್ ನ್ಯಾಯಾಲಯ ಆದೇಶ

24/10/2023, 12:44

ಬ್ರಹ್ಮಾವರ(reporterkarnataka.com):ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದೆ.
ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್ ಮುಖಂಡ ಕರಾವಳಿ ಮಲೆನಾಡು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತೀವ್ರವಾಗಿ ಖಂಡಿಸಿ ಮಾತಾನಾಡಿ ತನಿಖೆ ನಡೆಸಲು ಆಗ್ರಹಿಸಿದ್ದರು.
ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು