6:59 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ಆಡಿಷಲ್ ಸಿವಿಲ್ ನ್ಯಾಯಾಲಯ ಆದೇಶ

24/10/2023, 12:44

ಬ್ರಹ್ಮಾವರ(reporterkarnataka.com):ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದೆ.
ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್ ಮುಖಂಡ ಕರಾವಳಿ ಮಲೆನಾಡು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತೀವ್ರವಾಗಿ ಖಂಡಿಸಿ ಮಾತಾನಾಡಿ ತನಿಖೆ ನಡೆಸಲು ಆಗ್ರಹಿಸಿದ್ದರು.
ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು