12:02 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ಆಡಿಷಲ್ ಸಿವಿಲ್ ನ್ಯಾಯಾಲಯ ಆದೇಶ

24/10/2023, 12:44

ಬ್ರಹ್ಮಾವರ(reporterkarnataka.com):ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದೆ.
ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್ ಮುಖಂಡ ಕರಾವಳಿ ಮಲೆನಾಡು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತೀವ್ರವಾಗಿ ಖಂಡಿಸಿ ಮಾತಾನಾಡಿ ತನಿಖೆ ನಡೆಸಲು ಆಗ್ರಹಿಸಿದ್ದರು.
ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು