9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬ್ರ್ಯಾಂಡ್ ಮಂಗಳೂರು ವಾಕಥಾನ್; ಜನತೆಯ ಸಹಭಾಗಿತ್ವದಲ್ಲಿ ಸಮೃದ್ಧ ಮಂಗಳೂರು: ಮೇಯರ್ ಸುಧೀರ್ ಶೆಟ್ಟಿ ಆಶಯ

17/12/2023, 18:16

ಮಂಗಳೂರು(reporterkarnataka.com): ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾದ ಬ್ರ್ಯಾಂಡ್ ಮಂಗಳೂರು ವಾಕಥಾನ್ ಗೆ ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸಮೃದ್ಧ ಮಂಗಳೂರು ಸಾಕಾರಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಂಗಳೂರು ವಿಶ್ವ ವಿದ್ಯಾನಿಲಯ ದ ಎನ್ ಎಸ್‌ ಎಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ, ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಇಂಜಿನಿಯರ್ ಚಂದ್ರಶೇಖರಯ್ಯ ಕೆ.ಟಿ., ಮಂಗಳೂರು ಸ್ಮಾರ್ಟ್ ಸಿಟಿ ಮಹಾಪ್ರಬಂಧಕ ಅರುಣ್ ಪ್ರಭಾ,ಗ್ರಾಮೀಣ ವಿಕಾಸ ಯೋಜನೆಯ ನೋಡಲ್ ಅಧಿಕಾರಿ ತುಕಾರಾಮ ಗೌಡ,ಎನ್ ಎಸ್ ಎಸ್ ಸೈಂಟ್ ಆಗ್ನೆಸ್ ಕಾಲೇಜಿನ ಯೋಜನಾಧಿಕಾರಿ ಉದಯ ಕುಮಾರ್, ಕೆನರಾ ಕಾಲೇಜಿನ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಕೀರ್ತನಾ ಭಟ್, ಬೆಸೆಂಟ್ ಕಾಲೇಜಿನ ಯೋಜನಾಧಿಕಾರಿ ರವಿ ಪ್ರಭ,ಜಿಲ್ಲಾ ಪತ್ರ ಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಸದಸ್ಯ ರೇಮಂಡ್ ತಾಕೊಡೆ, ರೆಡ್ ಕ್ರಾಸ್ ನಿರ್ದೇಶಕ
ರವೀಂದ್ರನಾಥ ಉಚ್ಚಿಲ್, ವಿಭಾ ನಾಯಕ್ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.



ದ.ಕ.ಜಿಲ್ಲಾಡಳಿತ, ಮಂಗಳೂರು ಮಹಾ ನಗರ ಪಾಲಿಕೆ, ಮಂಗಳೂರು ಸ್ಮಾರ್ಟ್ ಸಿಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಪೊಲೀಸ್ ಆಯುಕ್ತರ ಕಾರ್ಯಾಲಯ, ಮಂಗಳೂರು ವಿ.ವಿ.ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ವಾಕಥಾನ್ ನಡೆಯಿತು. ನಗರದ ಮೈದಾನ್ ರಸ್ತೆ- ಸ್ಟೇಟ್ ಬ್ಯಾಂಕ್- ಹಂಪನಕಟ್ಟೆ ರಸ್ತೆ ಮೂಲಕ ಸಾಗಿ ಬಂದ ವಾಕಥಾನ್ ನಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು