12:20 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಬೆಂಗಳೂರಿನ 9 ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ದಾಳಿ

22/03/2022, 20:36

ಬೆಂಗಳೂರು(reporterkarnataka.com): ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮತ್ತೆ ಭ್ರಷ್ಟತೆ ಭೇಟೆಗಿಳಿದಿದೆ. ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

ಎಸಿಬಿ ಬೆಂಗಳೂರು ನಗರ ತಂಡ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ.

ಯಾರ ಯಾರ ಮೇಲೆ ದಾಳಿ?: 

* ರಘು ಬಿ ಎನ್, ಚಾಮರಾಜಪೇಟೆ.

* ಮೋಹನ್, ನೋರಾಯನಪಾಳ್ಯ. ಆರ್.ಟಿ.ನಗರ.

* ಮನೋಜ್, ದೊಮ್ಮಲೂರು.

* ಮುನಿರತ್ನ @ ರತ್ನವೇಲು, ಕೆನಗುಂಟೆ, ಮಲ್ತಳ್ಳಿ.

* ತೇಜು@ತೇಜಸ್ವಿ, ಆರ್ ಆರ್ ನಗರ.

* ಅಶ್ವತ್#ಮುದ್ದಿನಪಾಳ್ಯ ಅಶ್ವತ್, ಕೆಜಿ ಸರ್ಕಲ್, ಮುದ್ದಿನಪಾಳ್ಯ.

* ರಾಮ ಚಾಮುಂಡೇಶ್ವರಿನಗರ, ಬಿಡಿಎ ಬಡಾವಣೆ.

*ಲಕ್ಷ್ಮಣ, ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್.

*ಚಿಕ್ಕಹನುಮ್ಮಯ್ಯ, ಮುದ್ದಿನಪಾಳ್ಯ, ಬೆಂಗಳೂರು.

ಇತ್ತೀಚಿನ ಸುದ್ದಿ

ಜಾಹೀರಾತು