8:01 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್

04/11/2023, 11:36

ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ‘ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ‘ ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪಿ, ಸಿ. ಎ. ಸೈಮನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಮಾತನಾಡಿದರು. ಲಂಚವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳುವುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಲಾಭ ಪಡೆದುಕೊಳ್ಳುವುದು ಕೂಡ ಭ್ರಷ್ಟಾಚಾರವೇ ಆಗಿದೆ. ಅದನ್ನು ಆಳವಾಗಿ ಬೇರೂರಲು ಬಿಟ್ಟರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಭ್ರಷ್ಟಾಚಾರವು ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕವಾಗಿದೆ. ಲೋಕಾಯುಕ್ತ ಆಕ್ಟ್ ಮತ್ತು ಆರ್‌.ಟಿ.ಐ ಆಕ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಸರಕಾರದ ಬಲವನ್ನು ಗಟ್ಟಿಗೊಳಿಸುವ ಅಸ್ತ್ರವಾಗಿದೆ. ನಮ್ಮ ಮೌನ ನಮ್ಮ ಹಕ್ಕುಗಳನ್ನು ದಮನಿಸುತ್ತದೆ. ದೇಶ ಕಟ್ಟಲು ನಮ್ಮ ಕೊಡುಗೆ ಬಹಳ ಅಗತ್ಯ ಎಂದು ಅವರು ನುಡಿದರು.
ಕಾಲೇಜು ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ನಾಗರಿಕರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರತಿಮಾ ವಿ. ಬಾಳಿಗ ಸ್ವಾಗತಿಸಿದರು. ಅನುಸೂಯ ವಂದಿಸಿದರು. ಮಧುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು