9:42 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್

04/11/2023, 11:36

ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ‘ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ‘ ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪಿ, ಸಿ. ಎ. ಸೈಮನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಮಾತನಾಡಿದರು. ಲಂಚವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳುವುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಲಾಭ ಪಡೆದುಕೊಳ್ಳುವುದು ಕೂಡ ಭ್ರಷ್ಟಾಚಾರವೇ ಆಗಿದೆ. ಅದನ್ನು ಆಳವಾಗಿ ಬೇರೂರಲು ಬಿಟ್ಟರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಭ್ರಷ್ಟಾಚಾರವು ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕವಾಗಿದೆ. ಲೋಕಾಯುಕ್ತ ಆಕ್ಟ್ ಮತ್ತು ಆರ್‌.ಟಿ.ಐ ಆಕ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಸರಕಾರದ ಬಲವನ್ನು ಗಟ್ಟಿಗೊಳಿಸುವ ಅಸ್ತ್ರವಾಗಿದೆ. ನಮ್ಮ ಮೌನ ನಮ್ಮ ಹಕ್ಕುಗಳನ್ನು ದಮನಿಸುತ್ತದೆ. ದೇಶ ಕಟ್ಟಲು ನಮ್ಮ ಕೊಡುಗೆ ಬಹಳ ಅಗತ್ಯ ಎಂದು ಅವರು ನುಡಿದರು.
ಕಾಲೇಜು ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ನಾಗರಿಕರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರತಿಮಾ ವಿ. ಬಾಳಿಗ ಸ್ವಾಗತಿಸಿದರು. ಅನುಸೂಯ ವಂದಿಸಿದರು. ಮಧುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು