9:35 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ನಿವಾಸ ಎದುರು ಧರಣಿ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಬಂಧನ

04/03/2023, 20:23

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನಾ ಧರಣಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನೂರಾರು ಮಂದಿ ಕಾಂಗ್ರೆಸ್ ನಾಯಕರನ್ನು ಶನಿವಾರ ಪೊಲೀಸರು ಬಂಧಿಸಿದರು.

ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ಕೂತ ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಸೇರಿಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಧರಣಿ ಕೂತ ಸಿದ್ದರಾಮಯ್ಯ ಅವರನ್ನು ಪೊಲೀಸರು ಬಲವಂತವಾಗಿ ಎಬ್ಬಿಸಿ ಕರೆದೊಯ್ದರು.

ಭ್ರಷ್ಟಾಚಾರಿಗಳನ್ನು ಭ್ರಷ್ಟ‌ ಸರ್ಕಾರ ರಕ್ಷಿಸುತ್ತಿರುವುದು ವ್ಯವಸ್ಥೆಯ ದುರಂತ. ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮಗನ ಲಂಚಾವತಾರದ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಜ್ವಾಲಾಮುಖಿಯನ್ನು ಬಂಧನದ ಅಸ್ತ್ರದ ಮೂಲಕ ತಣ್ಣಗಾಗಿಸಲು ಸಾಧ್ಯವಿಲ್ಲ. 40% ಬಿಜೆಪಿ ಸರ್ಕಾರ ಈ ಕೂಡಲೇ ಆಡಳಿತದಿಂದ ಕೆಳಗಿಳಿಯಬೇಕು. ನಮ್ಮ ನಾಯಕರ ಬಂಧನ ಅಕ್ಷಮ್ಯ ಎಂದು ಕೆಪಿಸಿಸಿ ಟ್ವಿಟ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು