4:30 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್

03/08/2024, 17:17

ಭೀಮಣ ಪೂಜಾರ್ ಮಲಕಾರಿ ವಿಜಯಪುರ

info.reporterkarnataka@gmail.com

ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಮುಡಾ ವಿಚಾರವಾಗಿ ಹಮ್ಮಿಕೊಂಡ ಬೆಂಗಳೂರು- ಮೈಸೂರು ಪಾದಯಾತ್ರೆಗೆ ಬಗ್ಗೆ ಯತ್ನಾಳ್ ಅವರು ಲೇವಡಿ ಮಾಡಿದ್ದಾರೆ. ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆದಿದೆ. ಭ್ರಷ್ಟಾಚಾರಿಗಳ ಹೋರಾಟಕ್ಕೆ ಯಾವುದೇ ಮಹತ್ವವಿಲ್ಲ ಎಂದು ಕಿಚಾಯಿಸಿದ್ದಾರೆ.ಯಡಿಯೂರಪ್ಪ ಕುಟುಂಬ
ವಿರುದ್ಧ ಯತ್ನಾಳ್​ಎಂದಿನಂತೆ ಕಿಡಿ ಕಾರಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಲ್ಲ. ಅಂದು ಬಿ.ಎಸ್​​​​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ಇದೇ ವಿಜಯೇಂದ್ರ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್​ ಸಂದರ್ಭದಲ್ಲಿ ಬಿಜೆಪಿಯ ಅವಧಿಯಲ್ಲಾದ ಹಗರಣದ ಬಗ್ಗೆ ತನಿಖೆ ನಡೆಸಲಿ. ಮೊದಲು ವಿಜಯೇಂದ್ರ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಿಎಂ ಹೊರಹಾಕಲಿ. ನೈತಿಕತೆ ಇದ್ದರೆ ಬಿಎಸ್​​​ವೈ ಇಂದು ಪಾದಯಾತ್ರೆ ಚಾಲನೆ ವೇಳೆ ವೇದಿಕೆ ಹತ್ತಬಾರದಿತ್ತು. ಮೊದಲು ನಿಮ್ಮ ಹಗರಣ ನೋಡಿಕೊಳ್ಳಿ ಎಂದು ಬಿಎಸ್​​ವೈ ಕುಟುಂಬದ ವಿರುದ್ಧ ಯತ್ನಾಳ್​ ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು