4:11 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್

03/08/2024, 17:17

ಭೀಮಣ ಪೂಜಾರ್ ಮಲಕಾರಿ ವಿಜಯಪುರ

info.reporterkarnataka@gmail.com

ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಮುಡಾ ವಿಚಾರವಾಗಿ ಹಮ್ಮಿಕೊಂಡ ಬೆಂಗಳೂರು- ಮೈಸೂರು ಪಾದಯಾತ್ರೆಗೆ ಬಗ್ಗೆ ಯತ್ನಾಳ್ ಅವರು ಲೇವಡಿ ಮಾಡಿದ್ದಾರೆ. ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆದಿದೆ. ಭ್ರಷ್ಟಾಚಾರಿಗಳ ಹೋರಾಟಕ್ಕೆ ಯಾವುದೇ ಮಹತ್ವವಿಲ್ಲ ಎಂದು ಕಿಚಾಯಿಸಿದ್ದಾರೆ.ಯಡಿಯೂರಪ್ಪ ಕುಟುಂಬ
ವಿರುದ್ಧ ಯತ್ನಾಳ್​ಎಂದಿನಂತೆ ಕಿಡಿ ಕಾರಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಲ್ಲ. ಅಂದು ಬಿ.ಎಸ್​​​​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ಇದೇ ವಿಜಯೇಂದ್ರ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್​ ಸಂದರ್ಭದಲ್ಲಿ ಬಿಜೆಪಿಯ ಅವಧಿಯಲ್ಲಾದ ಹಗರಣದ ಬಗ್ಗೆ ತನಿಖೆ ನಡೆಸಲಿ. ಮೊದಲು ವಿಜಯೇಂದ್ರ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಿಎಂ ಹೊರಹಾಕಲಿ. ನೈತಿಕತೆ ಇದ್ದರೆ ಬಿಎಸ್​​​ವೈ ಇಂದು ಪಾದಯಾತ್ರೆ ಚಾಲನೆ ವೇಳೆ ವೇದಿಕೆ ಹತ್ತಬಾರದಿತ್ತು. ಮೊದಲು ನಿಮ್ಮ ಹಗರಣ ನೋಡಿಕೊಳ್ಳಿ ಎಂದು ಬಿಎಸ್​​ವೈ ಕುಟುಂಬದ ವಿರುದ್ಧ ಯತ್ನಾಳ್​ ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು