4:32 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್

03/08/2024, 17:17

ಭೀಮಣ ಪೂಜಾರ್ ಮಲಕಾರಿ ವಿಜಯಪುರ

info.reporterkarnataka@gmail.com

ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಮುಡಾ ವಿಚಾರವಾಗಿ ಹಮ್ಮಿಕೊಂಡ ಬೆಂಗಳೂರು- ಮೈಸೂರು ಪಾದಯಾತ್ರೆಗೆ ಬಗ್ಗೆ ಯತ್ನಾಳ್ ಅವರು ಲೇವಡಿ ಮಾಡಿದ್ದಾರೆ. ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆದಿದೆ. ಭ್ರಷ್ಟಾಚಾರಿಗಳ ಹೋರಾಟಕ್ಕೆ ಯಾವುದೇ ಮಹತ್ವವಿಲ್ಲ ಎಂದು ಕಿಚಾಯಿಸಿದ್ದಾರೆ.ಯಡಿಯೂರಪ್ಪ ಕುಟುಂಬ
ವಿರುದ್ಧ ಯತ್ನಾಳ್​ಎಂದಿನಂತೆ ಕಿಡಿ ಕಾರಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಲ್ಲ. ಅಂದು ಬಿ.ಎಸ್​​​​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ಇದೇ ವಿಜಯೇಂದ್ರ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್​ ಸಂದರ್ಭದಲ್ಲಿ ಬಿಜೆಪಿಯ ಅವಧಿಯಲ್ಲಾದ ಹಗರಣದ ಬಗ್ಗೆ ತನಿಖೆ ನಡೆಸಲಿ. ಮೊದಲು ವಿಜಯೇಂದ್ರ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಿಎಂ ಹೊರಹಾಕಲಿ. ನೈತಿಕತೆ ಇದ್ದರೆ ಬಿಎಸ್​​​ವೈ ಇಂದು ಪಾದಯಾತ್ರೆ ಚಾಲನೆ ವೇಳೆ ವೇದಿಕೆ ಹತ್ತಬಾರದಿತ್ತು. ಮೊದಲು ನಿಮ್ಮ ಹಗರಣ ನೋಡಿಕೊಳ್ಳಿ ಎಂದು ಬಿಎಸ್​​ವೈ ಕುಟುಂಬದ ವಿರುದ್ಧ ಯತ್ನಾಳ್​ ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು