1:42 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ: ಪಾದಯಾತ್ರೆ ಕುರಿತು ಬಿಎಸ್ ವೈ ಕುಟುಂಬವನ್ನು ಕಿಚಾಯಿಸಿದ ಯತ್ನಾಳ್

03/08/2024, 17:17

ಭೀಮಣ ಪೂಜಾರ್ ಮಲಕಾರಿ ವಿಜಯಪುರ

info.reporterkarnataka@gmail.com

ಬಿಜೆಪಿ ತನ್ನ ಮಿತ್ರಪಕ್ಷವಾದ ಜೆಡಿಎಸ್ ಜತೆ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ದ ಮಾಡುತ್ತಿರುವ ಪಾದಯಾತ್ರೆಗೆ ಸ್ವಪಕ್ಷೀಯರೇ ಆದ ಮಾಜಿ ಕೇಂದ್ರ ಸಚಿವ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ.
ಮುಡಾ ವಿಚಾರವಾಗಿ ಹಮ್ಮಿಕೊಂಡ ಬೆಂಗಳೂರು- ಮೈಸೂರು ಪಾದಯಾತ್ರೆಗೆ ಬಗ್ಗೆ ಯತ್ನಾಳ್ ಅವರು ಲೇವಡಿ ಮಾಡಿದ್ದಾರೆ. ಭ್ರಷ್ಟಾಚಾರಿಗಳಿಂದಲೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆದಿದೆ. ಭ್ರಷ್ಟಾಚಾರಿಗಳ ಹೋರಾಟಕ್ಕೆ ಯಾವುದೇ ಮಹತ್ವವಿಲ್ಲ ಎಂದು ಕಿಚಾಯಿಸಿದ್ದಾರೆ.ಯಡಿಯೂರಪ್ಪ ಕುಟುಂಬ
ವಿರುದ್ಧ ಯತ್ನಾಳ್​ಎಂದಿನಂತೆ ಕಿಡಿ ಕಾರಿದ್ದಾರೆ.
ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಲ್ಲ. ಅಂದು ಬಿ.ಎಸ್​​​​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ಇದೇ ವಿಜಯೇಂದ್ರ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಹಾಗೂ ವಿಜಯೇಂದ್ರ ನಡುವೆ ಹೊಂದಾಣಿಕೆ ಇದೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್​ ಸಂದರ್ಭದಲ್ಲಿ ಬಿಜೆಪಿಯ ಅವಧಿಯಲ್ಲಾದ ಹಗರಣದ ಬಗ್ಗೆ ತನಿಖೆ ನಡೆಸಲಿ. ಮೊದಲು ವಿಜಯೇಂದ್ರ ನಡೆಸಿದ ಭ್ರಷ್ಟಾಚಾರದ ಬಗ್ಗೆ ಸಿಎಂ ಹೊರಹಾಕಲಿ. ನೈತಿಕತೆ ಇದ್ದರೆ ಬಿಎಸ್​​​ವೈ ಇಂದು ಪಾದಯಾತ್ರೆ ಚಾಲನೆ ವೇಳೆ ವೇದಿಕೆ ಹತ್ತಬಾರದಿತ್ತು. ಮೊದಲು ನಿಮ್ಮ ಹಗರಣ ನೋಡಿಕೊಳ್ಳಿ ಎಂದು ಬಿಎಸ್​​ವೈ ಕುಟುಂಬದ ವಿರುದ್ಧ ಯತ್ನಾಳ್​ ಗುಡುಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು