4:32 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ದೆಹಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

02/12/2025, 17:45

ನವದೆಹಲಿ(reporterkarnataka.com): ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು