3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ದೆಹಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

02/12/2025, 17:45

ನವದೆಹಲಿ(reporterkarnataka.com): ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು