5:23 AM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ

11/07/2021, 18:39

ಸುರತ್ಕಲ್ (reporterkarnataka.com)

ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ.

ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೊಂಡೊಯ್ದರೆಂದು ಗಂಭೀರ ಹಲ್ಲೆ ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ರಿಕ್ಷಾ ಚಾಲಕ ಮಾಲಕರ ಸಂಘಟನೆಯಿಂದಲೂ ಠಾಣೆಗೆ ದೂರು ನೀಡಲಾಗಿದೆ.
ರಿಕ್ಷಾ ಚಾಲಕ ಸುಧಾಕರ ಅವರು ಈ ಹಿಂದೆ ಚೇಳಾರು ಸಿಟಿ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಈಗ ಸುರತ್ಕಲ್ ನಲ್ಲಿ ರಿಕ್ಷಾದಲ್ಲಿ ದುಡಿಯುತ್ತಿದ್ದಾರೆ. ಇಂದು ಬೆಳಿಗ್ಗೆ 8.30. ರ ಸುಮಾರಿಗೆ ಅವರು ಚೇಳಾರ್ ನಿಂದ ತನ್ನ ರಿಕ್ಷಾದಲ್ಲಿ ಸುರತ್ಕಲ್ ಗೆ ಬರುತ್ತಿದ್ದರು. ತಡಂಬೈಲ್ ಬಳಿ ಪ್ರಯಾಣಿಕರನ್ನು ಪಿಕಪ್ ಮಾಡಿ ಸುರತ್ಕಲ್ ಗೆ ಬರುತ್ತಿದ್ದಾಗ ಅತೀ ವೇಗವಾಗಿ ಬಂದ ಕೊಹಿನೂರು ಸರ್ವೀಸ್ ಬಸ್ ಸೂರಜ್ ಬಳಿ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಬಸ್ ನ ಕಂಡಕ್ಟರ್ ಮತ್ತು ಡ್ರೈವರ್, ಹಲ್ಲೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು