7:28 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ

11/07/2021, 18:39

ಸುರತ್ಕಲ್ (reporterkarnataka.com)

ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ.

ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೊಂಡೊಯ್ದರೆಂದು ಗಂಭೀರ ಹಲ್ಲೆ ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ರಿಕ್ಷಾ ಚಾಲಕ ಮಾಲಕರ ಸಂಘಟನೆಯಿಂದಲೂ ಠಾಣೆಗೆ ದೂರು ನೀಡಲಾಗಿದೆ.
ರಿಕ್ಷಾ ಚಾಲಕ ಸುಧಾಕರ ಅವರು ಈ ಹಿಂದೆ ಚೇಳಾರು ಸಿಟಿ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಈಗ ಸುರತ್ಕಲ್ ನಲ್ಲಿ ರಿಕ್ಷಾದಲ್ಲಿ ದುಡಿಯುತ್ತಿದ್ದಾರೆ. ಇಂದು ಬೆಳಿಗ್ಗೆ 8.30. ರ ಸುಮಾರಿಗೆ ಅವರು ಚೇಳಾರ್ ನಿಂದ ತನ್ನ ರಿಕ್ಷಾದಲ್ಲಿ ಸುರತ್ಕಲ್ ಗೆ ಬರುತ್ತಿದ್ದರು. ತಡಂಬೈಲ್ ಬಳಿ ಪ್ರಯಾಣಿಕರನ್ನು ಪಿಕಪ್ ಮಾಡಿ ಸುರತ್ಕಲ್ ಗೆ ಬರುತ್ತಿದ್ದಾಗ ಅತೀ ವೇಗವಾಗಿ ಬಂದ ಕೊಹಿನೂರು ಸರ್ವೀಸ್ ಬಸ್ ಸೂರಜ್ ಬಳಿ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಬಸ್ ನ ಕಂಡಕ್ಟರ್ ಮತ್ತು ಡ್ರೈವರ್, ಹಲ್ಲೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು