9:34 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ

11/07/2021, 18:39

ಸುರತ್ಕಲ್ (reporterkarnataka.com)

ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ.

ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೊಂಡೊಯ್ದರೆಂದು ಗಂಭೀರ ಹಲ್ಲೆ ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ರಿಕ್ಷಾ ಚಾಲಕ ಮಾಲಕರ ಸಂಘಟನೆಯಿಂದಲೂ ಠಾಣೆಗೆ ದೂರು ನೀಡಲಾಗಿದೆ.
ರಿಕ್ಷಾ ಚಾಲಕ ಸುಧಾಕರ ಅವರು ಈ ಹಿಂದೆ ಚೇಳಾರು ಸಿಟಿ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಈಗ ಸುರತ್ಕಲ್ ನಲ್ಲಿ ರಿಕ್ಷಾದಲ್ಲಿ ದುಡಿಯುತ್ತಿದ್ದಾರೆ. ಇಂದು ಬೆಳಿಗ್ಗೆ 8.30. ರ ಸುಮಾರಿಗೆ ಅವರು ಚೇಳಾರ್ ನಿಂದ ತನ್ನ ರಿಕ್ಷಾದಲ್ಲಿ ಸುರತ್ಕಲ್ ಗೆ ಬರುತ್ತಿದ್ದರು. ತಡಂಬೈಲ್ ಬಳಿ ಪ್ರಯಾಣಿಕರನ್ನು ಪಿಕಪ್ ಮಾಡಿ ಸುರತ್ಕಲ್ ಗೆ ಬರುತ್ತಿದ್ದಾಗ ಅತೀ ವೇಗವಾಗಿ ಬಂದ ಕೊಹಿನೂರು ಸರ್ವೀಸ್ ಬಸ್ ಸೂರಜ್ ಬಳಿ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಬಸ್ ನ ಕಂಡಕ್ಟರ್ ಮತ್ತು ಡ್ರೈವರ್, ಹಲ್ಲೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು