7:20 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ

11/07/2021, 18:39

ಸುರತ್ಕಲ್ (reporterkarnataka.com)

ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ.

ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೊಂಡೊಯ್ದರೆಂದು ಗಂಭೀರ ಹಲ್ಲೆ ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ರಿಕ್ಷಾ ಚಾಲಕ ಮಾಲಕರ ಸಂಘಟನೆಯಿಂದಲೂ ಠಾಣೆಗೆ ದೂರು ನೀಡಲಾಗಿದೆ.
ರಿಕ್ಷಾ ಚಾಲಕ ಸುಧಾಕರ ಅವರು ಈ ಹಿಂದೆ ಚೇಳಾರು ಸಿಟಿ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಈಗ ಸುರತ್ಕಲ್ ನಲ್ಲಿ ರಿಕ್ಷಾದಲ್ಲಿ ದುಡಿಯುತ್ತಿದ್ದಾರೆ. ಇಂದು ಬೆಳಿಗ್ಗೆ 8.30. ರ ಸುಮಾರಿಗೆ ಅವರು ಚೇಳಾರ್ ನಿಂದ ತನ್ನ ರಿಕ್ಷಾದಲ್ಲಿ ಸುರತ್ಕಲ್ ಗೆ ಬರುತ್ತಿದ್ದರು. ತಡಂಬೈಲ್ ಬಳಿ ಪ್ರಯಾಣಿಕರನ್ನು ಪಿಕಪ್ ಮಾಡಿ ಸುರತ್ಕಲ್ ಗೆ ಬರುತ್ತಿದ್ದಾಗ ಅತೀ ವೇಗವಾಗಿ ಬಂದ ಕೊಹಿನೂರು ಸರ್ವೀಸ್ ಬಸ್ ಸೂರಜ್ ಬಳಿ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಬಸ್ ನ ಕಂಡಕ್ಟರ್ ಮತ್ತು ಡ್ರೈವರ್, ಹಲ್ಲೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು