2:33 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

Breaking | ರಿಕ್ಷಾ ಚಾಲಕನ ಮೇಲೆ ಬಸ್ ಕಂಡಕ್ಟರ್, ಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ

11/07/2021, 18:39

ಸುರತ್ಕಲ್ (reporterkarnataka.com)

ಸುರತ್ಕಲ್ ಸೂರಜ್ ಹೊಟೇಲ್ ಬಳಿ ರಿಕ್ಷಾ ಚಾಲಕನನ್ನು ಕೊಹಿನೂರ್ ಬಸ್ ನ ಕಂಡಕ್ಟರ್ , ಡ್ರೈವರ್ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆಗೈದ ಘಟನೆ ಸಂಭವಿಸಿದೆ.

ಈ ಸಂದರ್ಭ ರಿಕ್ಷಾ ಚಾಲಕ ಸುಧಾಕರ ಚೇಳಾರ್ ಗಂಭಿರ ಗಾಯಗೊಂಡಿದ್ದು, ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಕರನ್ನು ಕೊಂಡೊಯ್ದರೆಂದು ಗಂಭೀರ ಹಲ್ಲೆ ಮಾಡಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ರಿಕ್ಷಾ ಚಾಲಕ ಮಾಲಕರ ಸಂಘಟನೆಯಿಂದಲೂ ಠಾಣೆಗೆ ದೂರು ನೀಡಲಾಗಿದೆ.
ರಿಕ್ಷಾ ಚಾಲಕ ಸುಧಾಕರ ಅವರು ಈ ಹಿಂದೆ ಚೇಳಾರು ಸಿಟಿ ಬಸ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು, ಈಗ ಸುರತ್ಕಲ್ ನಲ್ಲಿ ರಿಕ್ಷಾದಲ್ಲಿ ದುಡಿಯುತ್ತಿದ್ದಾರೆ. ಇಂದು ಬೆಳಿಗ್ಗೆ 8.30. ರ ಸುಮಾರಿಗೆ ಅವರು ಚೇಳಾರ್ ನಿಂದ ತನ್ನ ರಿಕ್ಷಾದಲ್ಲಿ ಸುರತ್ಕಲ್ ಗೆ ಬರುತ್ತಿದ್ದರು. ತಡಂಬೈಲ್ ಬಳಿ ಪ್ರಯಾಣಿಕರನ್ನು ಪಿಕಪ್ ಮಾಡಿ ಸುರತ್ಕಲ್ ಗೆ ಬರುತ್ತಿದ್ದಾಗ ಅತೀ ವೇಗವಾಗಿ ಬಂದ ಕೊಹಿನೂರು ಸರ್ವೀಸ್ ಬಸ್ ಸೂರಜ್ ಬಳಿ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಬಸ್ ನ ಕಂಡಕ್ಟರ್ ಮತ್ತು ಡ್ರೈವರ್, ಹಲ್ಲೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು