7:20 PM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ !

15/06/2021, 07:46

ಮಂಗಳೂರು(ReporterKarnataka.com)

ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.

ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.

ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು