1:46 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಲಂಚ ಸ್ವೀಕಾರ: ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸಹಿತ 3 ಮಂದಿ ಲೋಕಾಯುಕ್ತ ಬಲೆಗೆ

21/02/2026, 20:38

ಗದಗ(reporterkarnataka.com): ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶನಿವಾರ ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸಣ್ಣ ನೀರಾವರಿ ಯೋಜನೆಯನ್ನು ತೆರವುಗೊಳಿಸಲು ಡಾ.ಚಂದ್ರು ಲಮಾಣಿ 11 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಗದಗ ತಾಲೂಕಿನ ಚಿಂಚಲಿ ಗ್ರಾಮದ ಕ್ಲಾಸ್ 1 ಗುತ್ತಿಗೆದಾರ ವಿಜಯ ಪೂಜಾರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಶನಿವಾರ (ಫೆ. 21), ಮಧ್ಯಾಹ್ನ 2:15 ರ ಸುಮಾರಿಗೆ, ಡಾ.ಲಮಾಣಿ ಮತ್ತು ಅವರ ಆಪ್ತ ಸಹಾಯಕರಾದ ಮಂಜುನಾಥ್ ವಾಲ್ಮೀಕಿ ಮತ್ತು ಗುರು ನಾಯ್ಕ್ ಅವರು ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದಾಗ, ಡಾ.ಲಮಾಣಿ ಅವರ ಆಪ್ತ ಸಹಾಯಕ ಗುರುನಾಯ್ಕ್ ಅವರು ಸಮೀಪದ ಖಾಸಗಿ ಶಾಲೆಯ ಕಾಂಪೌಂಡ್‌ಗೆ 50,000 ಇದ್ದ ಕವರ್ ಅನ್ನು ಎಸೆದಿದ್ದಾರೆ ಎಂದು ವರದಿಯಾಗಿದೆ. ನಗದು ಒಳಗೊಂಡ ಕವರ್ ಜತೆಗೆ ₹4.50 ಲಕ್ಷ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ಆಸ್ಪತ್ರೆಯಿಂದ ವಶಪಡಿಸಿಕೊಂಡಿದ್ದಾರೆ.
ಗದಗ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ವಿಜಯ ಬಿರಾದಾರ್, ಇನ್ಸ್ ಪೆಕ್ಟರ್ ಪರಮೇಶ ಕವಟಗಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಗದಗ ಲೋಕಾಯುಕ್ತ ಪೊಲೀಸರು ಪಿಸಿ ಕಾಯ್ದೆ 1988 ರ ಕಲಂ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು