10:15 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿ: ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ರಕ್ಷಣೆ

05/01/2025, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತಾಯಿ ಜೊತೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಚರಂಡಿಗೆ ಬಿದ್ದ ಮರಿಯನ್ನ ಮೇಲೆ ಎಳೆಯಲಾಗದೇ ತಾಯಿ ನಾಯಿ ಕೂಗುತ್ತಿತ್ತು. ಚರಂಡಿ ನೀರಿನ ಜೊತೆ ನಾಯಿ ಮರಿ
ತೇಲಿ ಹೋಗುತ್ತಿತ್ತು.


ನಾಯಿ ಚರಂಡಿ ನೋಡಿ ಬೊಗಳುತ್ತಿದ್ದದನ್ನು ಸ್ಥಳಿಯರು ಗಮನಿಸಿದರು. ಚರಂಡಿಯಲ್ಲಿ ಡ್ರೈನೇಜ್ ಪೈಪ್ ಹಿಡಿದು ನಾಯಿ ಮರಿ ನಿಂತಿತ್ತು. ತಕ್ಷಣ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಸ್ಥಳಿಯರು ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ನಾಯಿ ಮರಿಯನ್ನು ರಕ್ಷಿಸಿದ್ದಾರೆ. ಡ್ರೈನೇಜ್ ಒಳಗಡೆ ಹೋಗಿ ಸ್ಲಾಬ್ ತೆಗೆದು ನಾಯಿಯನ್ನ ಅಗ್ನಿಶಾಮಕ ಸಿಬ್ಬಂದಿ ಹೊರಗೆ ತಂದಿದ್ದಾರೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಈ ಘಟನೆ ನಡೆದಿದೆ. ಚರಂಡಿಯಿಂದ ಮೇಲೆ ಎತ್ತುತ್ತಿದ್ದಂತೆ ಅಮ್ಮನ ಜೊತೆ ನಾಯಿ ಮರಿ ಓಡಿ ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು