8:00 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಬೃಹತ್ ಗಾಂಜಾ ಮಾರಾಟ ಜಾಲ ಬಯಲು: ವೈದ್ಯರು, ವೈದ್ಯಕೀಯ ವಿದ್ಯಾರ್ಥಿ ಗಳು ಸಹಿತ 10 ಮಂದಿ ಬಂಧನ; 15 ವರ್ಷಗಳಿಂದ ಬಿಡಿಎಸ್ ಕಲಿಯುತ್ತಿರುವ ಪೆಡ್ಲರ್!

11/01/2023, 16:40

ಮಂಗಳೂರು(reporterkarnataka.com): ನಗರದಲ್ಲಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯಾಧಿಕಾರಿ, ಸರ್ಜನ್ ಹಾಗೂ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ ನಾಲ್ವರು ಯುವತಿಯರು ಕೂಡ ಸೇರಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಕಾರ್ಯಾಚರಣೆ ಕುರಿತು ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್, ಮಂಗಳೂರಿನ ಬಂಟ್ಸ್ ಹಾಸ್ಟೇಲ್ ಬಳಿಯ ಅಪಾರ್ಟ್ಮೆಂಟ್‌ ವೊಂದರಲ್ಲಿ ಗಾಂಜಾ ಮಾರಾಟ ಮಾರಾಟದ ಮಾಹಿತಿ ಸಿಕ್ಕಿತ್ತು, ಗಾಂಜಾ ಪ್ರಕರಣದಲ್ಲಿ ನೀಲ್ ಕಿಶೋರಿಲಾಲ್ ರಾಮ್ ಜಿ ಷಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಎನ್ಆರ್ ಐ ಪ್ರಜೆಯಾಗಿದ್ದು, ಈ ಕೋಟಾದಡಿಯಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು 15 ವರ್ಷಗಳಿಂದಲೂ ಡೆಂಟಲ್ ಓದುತ್ತಿದ್ದಾನೆ.

ಆದರೂ ಆತ ಬಿಡಿಎಸ್ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ನಗರದ ಪ್ರತಿಷ್ಠಿತ ವೈದ್ಯಕಿಯ ಕಾಲೇಜುಗಳಲ್ಲಿನ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳೂ ಗಾಂಜಾ ಮಾರಾಟ ಮತ್ತು ಸೇವನೆಯಲ್ಲಿ ತೊಡಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿಸಿದರು.

ನೀಲ್‌ಕಿಶೋರ್‌ ರಾಮ್‌ಜಿ ಷಾ (38), ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಕೇರಳ ಮೂಲಕ ಡಾ.ಸಮೀರ್‌ (32), ವೈದ್ಯಕೀಯ ಸರ್ಜನ್ ತಮಿಳುನಾಡಿನ ಡಾ.ಮಣಿಮಾರನ್‌ ಮುತ್ತು (28) , ವೈದ್ಯ ವಿದ್ಯಾರ್ಥಿನಿಯರಾದ ಕೇರಳದ ನದಿಯಾ ಸಿರಾಜ್‌ (24), ಮಹಾರಾಷ್ಟ್ರದ ಇರಾ ಬಾಸಿನ್‌ (23), ಪಂಜಾಬ್ ನ ರಿಯಾ ಚಡ್ಡಾ (22), ಆಂಧ್ರಪ್ರದೇಶದ ವರ್ಷಿಣಿ ಪ್ರಾಥಿ (26), ಚಂಡೀಘಡದ ಭಾನು ದಹಿಯಾ (27), ದೆಹಲಿ ಕ್ಷಿತಿಜ್‌ ಗುಪ್ತ (25) ಹಾಗೂ ಬಂಟ್ವಾಳ ತಾಲ್ಲೂಕಿನ ಮಾರಿಪಳ್ಳದ ಮಹಮ್ಮದ್‌ ರವೂಫ್‌ ಅಲಿಯಾಸ್‌ ಗೌಸ್‌ (34) ಅವರನ್ನು ಬಂಧನ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು