11:44 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಕ್ರಿಯೆ: ಭಾರತ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

14/09/2022, 20:41

ಹೊಸದಿಲ್ಲಿ(reporterkarnataka.com): ಸುದೀರ್ಘ ಅವಧಿಗೆ ಬ್ರಿಟನ್‌ ರಾಣಿಯಾಗಿದ್ದ ಎಲಿಜಬೆತ್‌ II ಅವರ ಅಂತ್ಯಕ್ರಿಯೆಗೆ ಸೆಪ್ಟೆಂಬರ್‌ 19ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಸೇರಿ ಜಗತ್ತಿನ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅದೇ ರೀತಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕ್ವೀನ್‌ ಎಲಿಜಬೆತ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತ ಸರ್ಕಾರದ ಪರವಾಗಿ ದ್ರೌಪದಿ ಮುರ್ಮು ಅವರು ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್‌ 18ರಿಂದ 19ರವರೆಗೆ ದ್ರೌಪದಿ ಮುರ್ಮು ಅವರು ಲಂಡನ್‌ನಲ್ಲಿ ನಡೆಯುವ ಅಂತ್ಯಸಂಸ್ಕಾರ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಸುಮಾರು 70 ವರ್ಷಗಳ ಕಾಲ ಬ್ರಿಟನ್‌ ರಾಣಿಯಾಗಿದ್ದ ಕ್ವೀನ್‌ ಎಲಿಜಬೆತ್‌ II ಅವರು ಸೆಪ್ಟೆಂಬರ್‌ 8ರಂದು ನಿಧನರಾಗಿದ್ದಾರೆ. ಈಗ ಅವರ ಉತ್ತರಾಧಿಕಾರಿಯನ್ನಾಗಿ ಚಾರ್ಲ್ಸ್‌ III ಅವರನ್ನು ನೇಮಿಸಲಾಗಿದೆ. ಬ್ರಿಟನ್‌ ರಾಣಿಯ ನಿಧನಕ್ಕೆ ಜಗತ್ತೇ ಕಂಬನಿ ಮಿಡಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು