3:31 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು