12:13 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು