7:03 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು