12:56 AM Monday6 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು