12:19 AM Monday28 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು