2:53 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ: ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

19/09/2022, 19:22

ಹೊಸದಿಲ್ಲಿ(reporterkarnataka.com): ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಣಿಯವರ ಸ್ಮರಣೆಗಾಗಿ ಲಂಡನ್ ನ ಲ್ಯಾಂಕಾಸ್ಟರ್ ಹೌಸ್ ನಲ್ಲಿ ಇರಿಸಲಾಗಿರುವ ಸಂತಾಪ ಸೂಚಕ ಪುಸ್ತಕಕ್ಕೆ ಮುರ್ಮು ಈ ಸಂದರ್ಭ ಸಹಿ ಹಾಕಿದರು.

ಮೂರು ದಿನದ  ಭೇಟಿಗಾಗಿ ಲಂಡನ್’ಗೆ  ತೆರಳಿರುವ ಮುರ್ಮು ಭಾನುವಾರ ತಡರಾತ್ರಿ ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಬ್ರಿಟನ್‌ ಕಾಲಮಾನ ಬೆಳಿಗ್ಗೆ 11ಕ್ಕೆ ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ವೆಸ್ಟ್ ಮಿನ್ಸ್ಟರ್ ಅಬೆಯಲ್ಲಿ ನಡೆಯಲಿದ್ದು. ಭಾರತದ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗೌರವ ನಮನ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು