5:11 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಭಾರೀ ಕಾರ್ಯಾಚರಣೆ: 3 ಕೋಟಿ ಮೌಲ್ಯದ 3.12 ಕೆಜಿ ಬ್ರೌನ್‌ ಶುಗರ್ ಪೊಲೀಸ್ ವಶಕ್ಕೆ; 3 ಮಂದಿ ಬಂಧನ

16/05/2022, 09:27

ಪಾಟ್ನಾ(reporterkarnataka.com):

ಮಾದಕ ದ್ರವ್ಯದ ವಿರುದ್ಧ ಒಡಿಶಾ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಒಡಿಶಾದ ಪುರಿಯ ಮಂಗಲ ಘಾಟ್‌ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕ ದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೋಲೀಸರು 3.12 ಕೆಜಿ ಮೌಲ್ಯದ ಬ್ರೌನ್‌ ಶುಗರ್‌ ಅನ್ನು ವಶಪಡಿಸಿಕೊಂಡಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಒಡಿಶಾ ಪೋಲೀಸ್‌ ವಿಭಾಗದ ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ವತಿಯಿಂದ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರನ್ನು ಸುಶಾಂತ್‌ ಪಟ್ನಾಯಕ್‌ ಅಲಿಯಾಸ್‌ ನಂದಾ, ರಾಜ್‌ ಕಿಶೋರ್‌ ಸಾಹೂ, ,ಮಾನಸ್‌ ಸಾಹೂ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಅಂತರ್‌ ಜಿಲ್ಲಾ ಡ್ರಗ್‌ ಪೂರೈಕೆದಾರರಾಗಿದ್ದರು ಎನ್ನಲಾಗಿದೆ. ಬಂಧಿತರಿಂದ 20 ಸಾವಿರ ನಗದು, ನಾಲ್ಕು ಮೊಬೈಲ್‌, ಒಂದು ಕ್ಯಾಶ್‌ ಕೌಂಟಿಂಗ್‌ ಮಸೀನ್‌ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಇದು ಇಲ್ಲಿಯವರೆಗಿನ ಒಡಿಶಾ ಪೋಲೀಸ್‌ ಕಾರ್ಯಾಚರಣೆಯಲ್ಲಿ ಅತಿ ದೊಡ್ಡದು ಎನ್ನಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು